News

ಹಿರಿಯ ನಟ ದೇವರಾಜ್ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಹಿರಿಯ ನಟ ದೇವರಾಜ್ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
  • PublishedNovember 1, 2021

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ ಮಾಡಿದ್ದು, ಪುನೀತ್‌ ರಾಜ್‌ಕುಮಾರ್ ನಿಧನಾ ನಂತರ ಅಂತ್ಯಸಂಸ್ಕಾರ ಕಾರ್ಯವೆಲ್ಲ ನೆರವೇರಿದ ಬಳಿಕ ಸ್ವಲ್ಪ ತಡವಾಗಿ ಪಟ್ಟಿ ಪ್ರಕಟವಾಗಿದೆ.

ನವೆಂಬರ್ 1ರ ರಾಜ್ಯೋತ್ಸವಕ್ಕೂ ಮುನ್ನ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. 66 ಮಂದಿಯ ಹೆಸರು ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿದ್ದು ನಟ ದೇವರಾಜ್, ಟೆನ್ನಿಸ್ ಆಟಗಾರ ಬೋಪ್ಪಣ್ಣ ಹೆಸರು ಕೂಡ ಈ ಪಟ್ಟಿಯಲ್ಲಿದೆ. ಇದರೊಂದಿಗೆ ಈ ವರ್ಷ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅದರ ಸ್ಮರಣೆಗಾಗಿ ರಾಜ್ಯದ 10 ಸಂಘ ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಆದರೆ ಇದು ಈ ವರ್ಷಕ್ಕೆ ಮಾತ್ರ ಸೀಮಿತವಾಗಿರಲಿದೆ ಎಂದು ತಿಳಿಸಲಾಗಿದೆ.

****

Written By
Kannadapichhar

Leave a Reply

Your email address will not be published. Required fields are marked *