ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯ ಸ್ಥಿತಿ ಗಂಭಿರ ಬೌರಿಂಗ್ ಆಸ್ಪತ್ರೆಗೆ ದಾಖಲು..!
ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯದಲ್ಲಿ ಧಿಡೀರ್ ವ್ಯತ್ಯಾಸವಾಗಿದ್ದು ಅವರನ್ನು ಬೌರಿಂಗ್ ನ ಐಸಿಯು ವಾರ್ಡ್ ಗೆ ದಾಖಲು ಮಾಡಲಾಗಿದೆ ನಟ ಸತ್ಯಜಿತ್ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಗ್ಯಾಂಗ್ರಿನ್ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು. ಈಗ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸತ್ಯಜಿತ್ ಪುತ್ರ ಹೇಳಿರುವ ಪ್ರಕಾರ ಪ್ರಸ್ತುತ ಅವರ ಪರಿಸ್ಥಿತಿ ಗಂಭೀರವಾಗಿದೆ. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಲೇ ಇದೆ. ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಹಲವು ದಿನಗಳಿಂದ ಸತ್ಯಜಿತ್ಗೆ ಆರೋಗ್ಯ ಕೈಕೊಟ್ಟಿದ್ದರಿಂದ ಅವರಿಗೆ ಆರ್ಥಿಕ ಸಂಕಷ್ಟ ಕೂಡ ಎದುರಾಗಿದೆ. ಸ್ಯಾಂಡಲ್ ವುಡ್ ನಲ್ಲಿ ಒಂದು ಕಾಲದಲ್ಲಿ ಅವರು ಬಹು ಬೇಡಿಕೆಯ ಫೋಷಕ ನಟನಾಗಿದ್ದರು. ನೂರಾರು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಗಮನ ಸೆಳೆಯುತ್ತಿದ್ದ ಸತ್ಯಜಿತ್ ಅವರಿಗೆ ಗ್ಯಾಂಗ್ರಿನ್ ಕಾಣಿಸಿಕೊಂಡ ಬಳಿಕ ಬೇಡಿಕೆ ಕಡಿಮೆ ಆಯಿತು. 2018ರಲ್ಲಿ ತೆರೆಕಂಡ ಪ್ರಿಯಾಂಕಾ ಉಪೇಂದ್ರ ನಟನೆ ‘ಸೆಕೆಂಡ್ ಹಾಫ್’ ಚಿತ್ರದ ಬಳಿಕ ಬೇರೆ ಯಾವುದೇ ಸಿನಿಮಾದಲ್ಲಿ ಸತ್ಯಜಿತ್ ಕಾಣಿಸಿಕೊಂಡಿಲ್ಲ.
****