ಸ್ಯಾಂಡಲ್ವುಡ್ ನಟ ಅಜಯ್ ರಾವ್ ಮತ್ತು ಡಿಂಪಲ್ ಕ್ವೀನ್ ರಚಿತ ರಾಮ್ ಅಭಿನಯದ ‘ಲವ್ ಯ್ಯೂ ರಚ್ಚು’ ಚಿತ್ರದ ಚಿತ್ರೀಕರಣದ ವೇಳೆ ಸಂಭವಿಸಿದ ವಿದ್ಯುತ್ ಅವಘಡದಿಂದಾಗಿ ಫೈಟರ್ ವಿವೇಕ್ ಮೃತಪಟ್ಟಿದ್ದಾರೆ. ಇದೇ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರಂಜಿತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣದ ಸಂಬಂಧ ನಿರ್ದೇಶಕ ಶಂಕರ್, ಸಾಹಸ ನಿರ್ದೇಶಕ ವಿನೋದ್ ಹಾಗೂ ಕ್ರೇನ್ ಆಪರೇಟರ್ ಮಹಾದೇವ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮೃತ ಫೈಟರ್ ವಿವೇಕ್ ಅವರ ತಾಯಿಯ ಹೆಸರಿಗೆ ಬರೆದ 5 ಲಕ್ಷದ ಚೆಕ್ ಅನ್ನು ಪ್ರದರ್ಶಿಸುತ್ತಿರುವ ಗುರು ದೇಶಪಾಂಡೆ ಪತ್ನಿ ಪ್ರೀತಿಕಾ
ಈ ದುರ್ಘಟನೆಗೆ ಸಂಬಂಧಿಸಿದಂತೆ ನಿರ್ಮಾಪಕ ಗುರು ದೇಶಪಾಂಡೆ ಪತ್ನಿ ಪ್ರೀತಿಕಾ ಪತ್ರಿಕಾಗೋಷ್ಠಿ ನಡೆಸಿದರು. ಮೃತ ವಿವೇಕ್ ಕುಟುಂಬಕ್ಕೆ 10 ಲಕ್ಷ ರೂಪಾಯಿ ಕೊಡುವುದಾಗಿ ಗುರು ದೇಶಪಾಂಡೆ ಪತ್ನಿ ಪ್ರೀತಿಕಾ ತಿಳಿಸಿದ್ದಾರೆ. ಸದ್ಯ ವಿವೇಕ್ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೀಡುತ್ತೇವೆ. ಗುರು ದೇಶಪಾಂಡೆಗೆ ಜಾಮೀನು ದೊರೆತ ಬಳಿಕ ಇನ್ನೈದು ಲಕ್ಷ ರೂಪಾಯಿ ಕೊಡುತ್ತೇವೆ ಎಂದಿದ್ದಾರೆ ಪ್ರೀತಿಕಾ. ಹಾಗೇ, ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿರುವ ರಂಜಿತ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ನಾವೇ ಭರಿಸುತ್ತೇವೆ ಎಂದು ಪ್ರೀತಿಕಾ ಹೇಳಿದ್ದಾರೆ.
****