31.5 C
Bengaluru
Tuesday, March 28, 2023
spot_img

ಪುನೀತ್ ರಾಜಕುಮಾರ್ ಅಗಲಿಕೆ ಹಿನ್ನಲೆ ಕನ್ನಡ ಚಿತ್ರರಂಗದ ಚಟುವಟಿಕೆ ಸಂಪೂರ್ಣ ಬಂದ್

ನಟ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಚಿತ್ರಪ್ರದರ್ಶನವನ್ನು ನಿಲ್ಲಿಸಲಾಗಿದೆ. ಈ ಕುರಿತು ಮೈಸೂರಿನಲ್ಲಿ ಕರ್ನಾಟಕದ ಚಲನಚಿತ್ರ ಪ್ರದರ್ಶಕರ ಮಹಾ ಮಂಡಲ್ ಉಪಾಧ್ಯಕ್ಷ ರಾಜಾರಾಮ್ ಹೇಳಿಕೆ ನೀಡಿದ್ದಾರೆ. ಈಗಾಗಲೇ ಪ್ರಾರಂಭವಾಗಿರುವ ಚಿತ್ರ ಪ್ರದರ್ಶನ ಮುಂದುವರೆಯುತ್ತಿವೆ. 2.30 ಶೋ ಹಾಗೂ 4.30ಯ ನಂತರದ ಶೋಗಳು ಕ್ಯಾನ್ಸಲ್ ಆಗಿವೆ. ಚಿತ್ರರಂಗ ಮೊದಲು ಈ ಶಾಕ್ ನಿಂದ ಹೊರ ಬರಬೇಕು. ಮುಂದೆ ಯಾವಾಗ ಚಿತ್ರ ಪ್ರದರ್ಶನ ಮಾಡಬೇಕು ನೋಡೋಣ. ಪುನೀತ್ ಅವರಿಗೆ ಈ ರೀತಿ ಆಗಿರೊದು ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರು ದುಃಖ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಹಲವು ಸಿನಿಮಾಗಳ ಚಿತ್ರೀಕರಣವನ್ನು ಚಿತ್ರತಂಡಗಳು ಸ್ವಯಂ ಆಗಿ ಬಂದ್ ಮಾಡಿಕೊಂಡಿವೆ. ಇಡೀ ಸ್ಯಾಂಡಲ್ ವುಡ್ ಪುನೀತ್ ಅಗಲಿಕೆಯಿಂದಾಗಿ ಶಾಕ್ ಗೆ ಒಳಗಾಗಿದೆ, ಶೋಕ ಸಾಗರದಲ್ಲಿ ಮುಳುಗಿದೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles