ಡಾ. ರಾಜ್ಕುಮಾರ್ ಟ್ರಸ್ಟ್ನಿಂದ ಪ್ರತಿ ವರ್ಷ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತದೆ. ಅದನ್ನು ಇನ್ನೊಂದು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಪುನೀತ್ ಆಸೆಪಟ್ಟಿದ್ದರು. ಆ ಕನಸನ್ನು ಸಹೋದರ ರಾಘವೇಂದ್ರ ರಾಜ್ಕುಮಾರ್ ಜೊತೆ ಹೇಳಿಕೊಂಡಿದ್ದರು. ಅದು ನನಸಾಗುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿರುವುದು ದುಃಖದ ಸಂಗತಿ. ಆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ರಾಘಣ್ಣ ಪೋಸ್ಟ್ ಮಾಡಿದ್ದಾರೆ.
‘ಇತ್ತೀಚೆಗೆ ನನಗೆ ದಾದಾಸಾಹೇಬ್ ಫಾಲ್ಕೆ ಎಮ್ಎಸ್ಕೆ ಟ್ರಸ್ಟ್ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿ ಬಂದ ಸಂದರ್ಭದಲ್ಲಿ ಅಪ್ಪುಗೆ ಎಲ್ಲಿಲ್ಲದ ಸಂತೋಷ. ನನ್ನನ್ನು ತಕ್ಷಣ ಭೇಟಿ ಮಾಡಿ, ಈ ಸೆಲ್ಫಿ ತೆಗೆದು, ರಾಘಣ್ಣ.. ನಾವೂ ಸಹ ಈ ಮೂರ್ತಿಯ ರೂಪದ ಹಾಗೆ ಅಪ್ಪಾಜಿಯವರ ಮೂರ್ತಿಯನ್ನು ಮಾಡಿ ಎಂದಿನಂತೆ ಡಾ. ರಾಜ್ಕುಮಾರ್ ಟ್ರಸ್ಟ್ನಿಂದ ನೀಡುವ ಪ್ರಶಸ್ತಿಯನ್ನು ಇದೇ ರೂಪದಲ್ಲಿ ಮಾಡೋಣ ಅಂತ ಹೇಳಿದ್ದನು. ಅಪ್ಪು ನಿನ್ನ ಆಲೋಚನೆಗೆ ನನ್ನದೊಂದು ನಮನ. ಲವ್ ಯೂ ಮಗನೆ’ ಎಂದು ರಾಘವೇಂದ್ರ ರಾಜ್ಕುಮಾರ್ ಬರೆದುಕೊಂಡಿದ್ದಾರೆ.
****