ಶ್ರೀಮುರಳಿ ನಾಯಕನಾಗಿ ಅಭಿನಯಿಸಿರುವ “ಮದಗಜ” ಚಿತ್ರದ ಹಾಡು ರಿಲೀಸ್ ಆಗಿದ್ದು ಆ ಹಾಡನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಣೆ ಮಾಡಿದ್ದಾರೆ. ನಂತರ ಮಾತನಾಡಿದ ಶ್ರೀಮುರಳಿ ಪುನೀತ್ ನನ್ನ ಇಂಟ್ರಡಕ್ಷನ್ ಸಾಂಗ್ ನೋಡಿ ಮೆಚ್ಚಿಕೊಂಡಿದ್ರು ಹಾಗಾಗಿ ಪೂಜೆ ಸಲ್ಲಿಸಿ ಅವರಿಗೆ ಸಾಂಗ್ ಅರ್ಪಿಸುತ್ತೇವೆ, ಅಪ್ಪುರನ್ನ ಯಾವತ್ತು ನಮಗೆ ಮರೆಯೋಕೆ ಆಗಲ್ಲ ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ, ಈ ವೇಳೆ ನಿರ್ದೇಶಕರಾದ ಮಹೇಶ್ ಕುಮಾರ್, ನಿರ್ಮಾಪಕರಾದ ಉಮಾಪತಿ ನಟ ಶಿವರಾಜ್ ಕೆ.ಆರ್.ಪೇಟೆ ಹಾಜರಿದ್ದರು
ಶ್ರೀಮುರಳಿ ಮತ್ತು ಆಶಿಕಾ ರಂಗನಾಥ್ ನಟನೆಯ ‘ಮದಗಜ’ ಸಿನಿಮಾದ ಮೇಲೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಅಯೋಗ್ಯ’ ಖ್ಯಾತಿಯ ಮಹೇಶ್ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಉಮಾಪತಿ ಶ್ರೀನಿವಾಸ್ ಗೌಡ ಬಂಡವಾಳ ಹೂಡಿದ್ದಾರೆ. ಸದ್ಯ ಹಾಡುಗಳ ಮೂಲಕ ‘ಮದಗಜ’ ಚಿತ್ರ ಭಾರಿ ಸೌಂಡು ಮಾಡುತ್ತಿದೆ. ಈಗ ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ನಟ ಶ್ರೀಮುರಳಿ ಅಬ್ಬರಿಸಿದ್ದಾರೆ. ಅವರ ಅಭಿಮಾನಿಗಳಿಗೆ ಈ ಹಾಡು ಸಖತ್ ಮನರಂಜನೆ ನೀಡುತ್ತಿದೆ.
****