News

ಶಿವಣ್ಣ ಗೀತಕ್ಕಾರಿಂದ ಹಸಿದ ಹೊಟ್ಟೆಗೆ ‌ಕೈ ತುತ್ತು..!!!

ಶಿವಣ್ಣ ಗೀತಕ್ಕಾರಿಂದ ಹಸಿದ ಹೊಟ್ಟೆಗೆ ‌ಕೈ ತುತ್ತು..!!!
  • PublishedMay 17, 2021

ನಾಗಾವರ ಜನತೆಗೆ ಆಸರೆಯಾದ ದೊಡ್ಮನೆ ದೊರೆ..!!

ಈ ಕೋವಿಡ್ ಸಂಕಷ್ಟದಲ್ಲಿ ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್, ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಹಾಗೂ ಶಿವಣ್ಣ ಬಾಯ್ಸ್ ಸೇರಿಕೊಂಡು, ತಾವು ನೆಲೆಸಿರೋ ನಾಗಾವರ ಏರಿಯಾದಲ್ಲಿ ಪ್ರತಿ‌ನಿತ್ಯ 500 ಜನರಿಗೆ ಊಟ, ತಿಂಡಿ ,ಹಾಗೂ ಟೀ ವ್ಯವಸ್ಥೆಯನ್ನ ಮಾಡಿದ್ದಾರೆ‌. ಈ ಸೇವೆಗೆಂದೇ ಶಿವಣ್ಣ ಬೊಲೇರೋ ಕ್ಯಾಂಟ್ರೋನ ಆರೇಂಜ್ ಮಾಡಿದ್ದು, ಈ ವಾಹನದಲ್ಲೇ ಊಟ ತಿಂಡಿ‌ ಸರಬರಾಜಾಗುತ್ತಿದೆ.

“ಆಸರೆ” ಹಸಿದ ಹೊಟ್ಟೆಗೆ ಕೈ ತುತ್ತು ಅನ್ನೋ ಶೀರ್ಷಿಕೆಯಡಿಯಲ್ಲಿ ನಡೆಯುತ್ತಿರೋ ಈ ಕಾರ್ಯಕ್ರಮ, ಸದ್ಯ 10ದಿನದವರೆಗೂ ಮುಂದುವರೆಯಲಿದೆ. ಲಾಕ್ ಡೌನ್ ಹೀಗೆ ಮುಂದುವರೆದಲ್ಲಿ‌ ಸುಮಾರು 1000 ಜನಕ್ಕೆ ಪ್ರತಿ ದಿನ ಅನ್ನ ದಾಸೋಹ ಮಾಡೋದಕ್ಕೆ ಯೋಜನೆಯನ್ನೂ ಶಿವಣ್ಣ, ಗೀತಕ್ಕ ಹಾಗೂ ಶಿವಣ್ಣ ಬಾಯ್ಸ್ ರೂಪಿಸಿಕೊಂಡಿದ್ದಾರೆ.

Written By
Kannadapichhar

Leave a Reply

Your email address will not be published. Required fields are marked *