News ಪಿಚ್ಚರ್ UPDATE

ಕೆಟಿವಿಎ ಸದಸ್ಯರಿಗೆ ಹೆಲ್ತ್ ಪ್ರಿವೀಲೇಜ್ ಕಾರ್ಡ್ ಕೊಡಲಿದ್ದಾರೆ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌

ಕೆಟಿವಿಎ ಸದಸ್ಯರಿಗೆ ಹೆಲ್ತ್ ಪ್ರಿವೀಲೇಜ್ ಕಾರ್ಡ್ ಕೊಡಲಿದ್ದಾರೆ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌
  • PublishedNovember 4, 2022

ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಕಳೆದ ವರ್ಷ ನವಂಬರ್ ತಿಂಗಳಲ್ಲಿ “ಅಪ್ಪು ಅಮರ” ಕಾರ್ಯಕ್ರಮದ ಮೂಲಕ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ಗೌರವ ಸಲ್ಲಿಸಿತ್ತು… ಇದೇ ಸಂದರ್ಭದಲ್ಲಿ ಪ್ರತಿಷ್ಠಿತ ಕಾವೇರಿ ಆಸ್ಪತ್ರೆಯು, ಸಾಯಿ ಸಂಗಮ ಡಯಾಗ್ನೋಸ್ಟಿಕ್ ಮತ್ತು ಹೆಲ್ತ್ ಕೇರ್ ಸಹಯೋಗದಲ್ಲಿ ಕೆಟಿವಿಎ ಸದಸ್ಯರುಗಳಿಗೆ “ಅಪ್ಪು ಅಮರ ಹೆಲ್ತ್ ಪ್ರೆವಿಲೈಜ್ ಕಾರ್ಡ್” ವಿತರಿಸುವ ಭರವಸೆ ನೀಡಿತ್ತು. ಅದರಂತೆ ದಿನಾಂಕ 13 11 2022 ರ ಭಾನುವಾರ ಸಂಜೆ ಐದು ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ “ಅಪ್ಪು ಅಮರ ಹೆಲ್ತ್ ಪ್ರಿವೀಲೇಜ್ ಕಾರ್ಡ್” ವಿತರಿಸಲು ನಿರ್ಧಾರ ಮಾಡಿದ್ದು ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಈ ಕಾರ್ಡ್‌ ವಿತರಣೆ ಮಾಡಲಿದ್ದಾರೆ…

ಈ ಕಾರ್ಡ್ ಪಡೆದ ಸದಸ್ಯರುಗಳಲ್ಲಿ ಅವಶ್ಯಕತೆ ಇರುವ ಹಾಗೂ ಆರ್ಥಿಕವಾಗಿ ದುರ್ಬಲರಾದ ಸದಸ್ಯರುಗಳಿಗೆ ಶಸ್ತ್ರಚಿಕಿತ್ಸೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಲು ಕಾವೇರಿ ಆಸ್ಪತ್ರೆ ಮತ್ತು ಸಾಯಿ ಸಂಗಮ ಡಯಾಗ್ನೋಸ್ಟಿಕ್ ಮತ್ತು ಹೆಲ್ತ್ ಕೇರ್ ನಿರ್ಧರಿಸಿದೆ. ಇದಲ್ಲದೆ ಈ ಹೆಲ್ತ್ ಕಾರ್ಡ್ ಅಡಿಯಲ್ಲಿ ಎಲ್ಲಾ ಸ್ಪೆಷಾಲಿಟಿ ಸವಲತ್ತುಗಳನ್ನು ಕಡಿಮೆ ದರದಲ್ಲಿ ಪಡೆದುಕೊಳ್ಳಬಹುದು. ಈ ಸವಲತ್ತನ್ನು ಸುಮಾರು 5000 ಸದಸ್ಯರು ಮತ್ತು ಅವರ ಕುಟುಂಬದವರು ಪಡೆಯಲಿದ್ದಾರೆ..ಈ ಕಾರ್ಯಕ್ರಮ ಸಾಯಿಸಂಗಮ ಡಯಾಗ್ನಾಸ್ಟಿಕ್ ಮತ್ತು ಹೆಲ್ತ್ ಕೇರ್, ಜಯನಗರ, ಯಡಿಯೂರು, ಬೆಂಗಳೂರು ನಲ್ಲಿ ನಡೆಯಲಿದೆ…ಈಗಾಗಲೇ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷರಾದ ಎಸ್.ವಿ. ಶಿವಕುಮಾರ್ ಅಶ್ವಿನಿ ಅವರನ್ನ ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿದ್ದಾರೆ ….

Written By
Kannadapichhar