News

ಎಲ್ಲಿ ನೋಡಿದ್ರು ಬಡವ ರಾಸ್ಕಲ್ ಹವಾ..!

ಎಲ್ಲಿ ನೋಡಿದ್ರು ಬಡವ ರಾಸ್ಕಲ್ ಹವಾ..!
  • PublishedNovember 30, 2021

‘ಬಡವ ರಾಸ್ಕಲ್’ ಚಿತ್ರದ ರಿಲೀಸ್‌ ದಿನಾಂಕ ಹತ್ತಿರ ಬರುತ್ತಿದೆ. ಚಿತ್ರದ ರಿಲೀಸ್‌ಗೆ ಇನ್ನು ಒಂದು ತಿಂಗಳು ಬಾಕಿ ಇದೆ. ಆದರೆ ಅದಾಗಲೇ ಈ ಚಿತ್ರ ವಿಭಿನ್ನವಾಗಿ ಪ್ರಚಾರಗೊಳ್ಳುತ್ತಿದೆ. ಶಾಲಾ ಮಕ್ಕಳಿಂದ ಹಿಡಿದು ದಿನಸಿ ಅಂಗಡಿ, ತರಕಾರಿ ಅಂಗಡಿ, ಮಾಂಸದ ಅಂಗಡಿ, ಕಾರು ಗ್ಯಾರೇಜ್, ಆಟೋ ಚಾಲಕರವರೆಗೂ ಬಹಳ ವರ್ಗಗಳಲ್ಲಿ ದುಡಿಯುವ ಕನ್ನಡಾಭಿಮಾನಿಗಳು ಚಿತ್ರವನ್ನು ನೋಡಲು ಕಾತುರರಾಗಿದ್ದಾರೆ.

ದಾಸರ ಕವಿವಾಣಿ “ಕೆರೆಯ ನೀರನು ಕೆರೆಗೆ ಚೆಲ್ಲಿ” ಅನ್ನುವಂತೆ ಕನ್ನಡ ಚಿತ್ರರಂಗದಲ್ಲಿ ಬದುಕು ಕಟ್ಟಿಕೊಂಡು ಬೆಳೆದ ಧನಂಜಯ ಅವರು ಕನ್ನಡ ಚಿತ್ರಗಳನ್ನು ನಿರ್ಮಿಸಿ ಬೆಳೆಸುವ ಪಣ ತೊಟ್ಟಿದ್ದಾರೆ. ಕನ್ನಡ ಕೂಲಕೋಟಿ ತಮ್ಮ ಬೆಂಬಲ ಕೊಟ್ಟು ಧನಂಜಯ ಅವರನ್ನು, ಕನ್ನಡ ಚಿತ್ರರಂಗವನ್ನು ಸಿನಿ ಪ್ರೇಕ್ಷಕರು ಕಲಾಭಿಮಾನಿಗಳು ಮತ್ತಷ್ಟು ಎತ್ತರಕ್ಕೆ ಬೆಳೆಸಬೇಕಾದೆ.

‘ಡಾಲಿ ಪಿಕ್ಚರ್’ ಬ್ಯಾನರ್‌ನಲ್ಲಿ ಸಾವಿತ್ರಮ್ಮ ಅಡವಿ ಸ್ವಾಮಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಶಂಕರ್‌ ಗುರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಡಾಲಿ ಧನಂಜಯ ಅವರಿಗೆ ನಾಯಕಿಯಾಗಿ ಅಮೃತ ಅಯ್ಯಂಗಾರ್‌ ಅಭಿನಯಿಸುತ್ತಿದ್ದಾರೆ. ಉಳಿದಂತೆ ರಂಗಾಯಣ ರಘು, ತಾರಾ, ಸ್ಪರ್ಶ ರೇಖಾ, ನಾಗಭೂಷಣ್‌, ಪೂರ್ಣಚಂದ್ರ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ವಾಸುಕಿ ವೈಭವ್‌ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಪ್ರೀತ ಜಯರಾಮನ್‌ ಛಾಯಾಗ್ರಹಣ, ನಿರಂಜನ್‌ ದೇವರಮನೆ ಸಂಕಲನ ಹಾಗೂ ವಿನೋದ್‌ ಸಾಹಸ ನಿರ್ದೇಶನವಿದೆ. ಈ ಚಿತ್ರವನ್ನು ಕರ್ನಾಟಕದಾದ್ಯಂತ ಕೆಆರ್ ಜಿ ಸ್ಟೂಡಿಯೋಸ್” ಸಂಸ್ಥೆ ಬಿಡುಗಡೆ ಮಾಡಲಿದೆ.

****

Written By
Kannadapichhar

Leave a Reply

Your email address will not be published. Required fields are marked *