ಕನಕಪುರ ಶ್ರೀನಿವಾಸ್ ಮೇಲೆ ಜೋಗಿ ಪ್ರೇಮ್ ದೂರು!
ವಾಣಿಜ್ಯ ಮಂಡಳಿ ಅಧ್ಯಕ್ಷರಿಗೆ ಇಂದು ನಿರ್ದೇಶಕ ಜೋಗಿ ಪ್ರೇಮ್ ಅವರಿಂದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರ ವಿರುದ್ಧ ದೂರು ನೀಡಿದ್ದಾರೆ.ಮೊನ್ನೆ ನಡೆದ ಕಾಟನ್ ಪೇಟೆ ಚಿತ್ರದ ಸುದ್ದಿಗೋಷ್ಟಿಯಲ್ಲಿ ಸಿನಿಮಾ ರಂಗದ ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ನಿರ್ದೇಶಕ ಜೋಗಿ ಪ್ರೇಮ್, ದರ್ಶನ್, ಅಪ್ಪು, ಧ್ರುವ ಸರ್ಜಾ ಸೇರಿದಂತೆ ಹಲವರ ಬಗ್ಗೆ ಅವಾಚ್ಯವಾಗಿ ಮಾತನಾಡಿದ್ದರು.ಈ ವಿಷ್ಯದ ಬಗ್ಗೆ ಮನ ನೊಂದ ಪ್ರೇಮ್ ಅವರು ಇಂದು ಕನಕಪುರ ಶ್ರೀನಿವಾಸ್ ಅವರ ಮೇಲೆ ದೂರನ್ನು ದಾಖಲು ಮಾಡಿದ್ದಾರೆ.