new updates News ಪಿಚ್ಚರ್ stories ಪಿಚ್ಚರ್ UPDATE

ಚಿತ್ರಮಂದಿರಗಳ ಕೊರತೆ ಶಿವಲೀಲಾ ಸಿನಿಮಾ ತಂಡ ಪ್ರೋಟೆಸ್ಟ್..

ಚಿತ್ರಮಂದಿರಗಳ ಕೊರತೆ ಶಿವಲೀಲಾ ಸಿನಿಮಾ ತಂಡ ಪ್ರೋಟೆಸ್ಟ್..
  • PublishedJanuary 4, 2026


ಲಿಂಗತ್ವ ಅಲ್ಪಸಂಖ್ಯಾತರ ಕುರಿತಾದ ಕಥೆಯನ್ನು ಹೊಂದಿರುವ ಶಿವಲೀಲಾ ಚಿತ್ರಕ್ಕೆ ಚಿತ್ರಮಂದಿರಗಳನ್ನು ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಚಿತ್ರತಂಡ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು.

ಹೌದು.. ಚಿತ್ರದ ಪ್ರಮುಖ ಪಾತ್ರಧಾರಿ ಮಂಜಮ್ಮ ಜೋಗತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಚಿತ್ರತಂಡ ಭಾಗಿಯಾಗಿತ್ತು. ಸಮಾಜದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಸಾಮಾನ್ಯರ ನಡುವೆ ಇರುವ ಭಿನ್ನಾಭಿಪ್ರಾಯಗಳನ್ನು ತೊಡೆದು ಹಾಕುವ ಬಲವಾದ ಪ್ರಯತ್ನವಿದು. ಸಮಾಜದಲ್ಲಿ ಈ ಸಮುದಾಯದ ಕುರಿತು ಜಾಗೃತಿ ಮೂಡಿಸುವ ಯತ್ನಕ್ಕೆ ಇಡೀ ರಾಜ್ಯದ ಮೂರು ಚಿತ್ರಮಂದಿರಗಳಲ್ಲಿ ತಲಾ ಒಂದು ಪ್ರದರ್ಶನ ಮಾತ್ರ ನೀಡಲಾಗಿದೆ. ಈ ಸಿನಿಮಾ ಪ್ರೋತ್ಸಾಹಿಸುವಂತೆ ಇತ್ತೀಚಿನ ಬೆಳಗಾವಿ ಅಧಿವೇಶನದಲ್ಲಿಯೂ ಸ್ಪೀಕರ್‌ ಯು.ಟಿ ಖಾದರ್‌ ಕೂಡ ಹೇಳಿದ್ದರು. ಶಾಲಾ, ಕಾಲೇಜು ಮಕ್ಕಳು ಕಡ್ಡಾಯವಾಗಿ ಈ ಚಿತ್ರ ನೋಡಲು ಸುತ್ತೋಲೆ ನೀಡಬೇಕೆಂದು ನಾವು ಈ ಮೂಲಕ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆ ಎಂದು ಚಿತ್ರದ ನಿರ್ದೇಶಕ ಅಶೋಕ್ ಜೈರಾಮ್ ತಿಳಿಸಿದ್ರು..

Written By
Kannada Picchar

Leave a Reply

Your email address will not be published. Required fields are marked *